ಮಧ್ಯಂತರ ಚುನಾವಣೆ ಬಗ್ಗೆ ಹೆಚ್.ಡಿ ದೇವೇಗೌಡರ ಹೇಳಿಕೆ ವಿಚಾರ: ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…?

ಯಾದಗಿರಿ,ಜೂ,21,2019(www.justkannada.in): ಮಧ್ಯಂತರ ಚುನಾವಣೆ  ಬಗ್ಗೆ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡರು ನೀಡಿರುವ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಾಗಿ ಎಂದು ಹೇಳಿದ್ದಾರೆ ಅಷ್ಟೆ ಎಂದಿದ್ದಾರೆ.

ಯಾದಗಿರಿಯಲ್ಲಿ ಇಂದು ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ದುಭದ್ರವಾಗಿದೆ. ಯಾವುದೇ ಆತಂಕವಿಲ್ಲ. ದೇವೇಗೌಡರ ಹೇಳಿಕೆಯನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ರೆಡಿಯಾಗಿ ಎಂದಷ್ಟೇ ದೇವೇಗೌಡರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಮೈಸೂರು ಉಳಿಸಿಕೊಳ್ಳಲು ತುಮಕೂರು ಬಿಟ್ಟುಕೊಟ್ಟರು.  ಆವಿಚಾರ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ನಮ್ಮ ಬಳಿ ಇದ್ದ ಒಂದು ಮಂತ್ರಿ ಸ್ಥಾನವನ್ನು ಕೂಡ ಕಾಂಗ್ರೆಸ್‌ನವರಿಗೆ ಬಿಟ್ಟುಕೊಟ್ಟಿದ್ದೀವಿ. ಆದರು ಕೂಡ ಎಲ್ಲವೂ ಶಮನವಾಗಿಲ್ಲ. ಈ ಸರಕಾರ ಎಷ್ಟು ದಿವಸ ಇರುತ್ತದೋ ನನಗೆ ಗೊತ್ತಿಲ್ಲ . ಇದೀಗ ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ.ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿಕೆ ನೀಡಿದ್ದರು.

Key words: HD Deve Gowda-statement – midterm –elections-CM HD Kumaraswamy -reaction