ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಸಿಎಂ ಬಿಎಸ್ ವೈ ಸೂಚನೆ….

kannada t-shirts

ಬೆಂಗಳೂರು,ಆ,6,2020(www.justkannada.in):  ರಾಜ್ಯಾದ್ಯಂತ ಎಡೆಬಿಡದೇ ಸುರಿಯುತ್ತಿರುವ ಮಹಾಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದ್ದು, ವರುಣನ ಆರ್ಭಟದಿಂದ ನದಿಗಳು ಉಕ್ಕಿಹರಿಯುತ್ತಿವೆ. ಹೀಗಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕೊರೋನಾ ಸೋಂಕಿನಿಂದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ, ಅಯಾ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಸಚಿವರ ಜತೆ ಜಿಲ್ಲಾಧಿಕಾರಿಗಳು ಕೆಲಸ ಮಾಡಿ ಎಂದು ಸೂಚನೆ ನೀಡಿದ್ದಾರೆ.heavy-rain-state-cm-bs-yeddyurappa-instructs-ministers

ಹಾಗೆಯೇ ಮಳೆ ಕಡಿಮೆ ಇರುವ ಜಿಲ್ಲೆಗಳ ಸಚಿವರೂ ಸಹ ಭೇಟಿ ನೀಡಿ. ಅಗತ್ಯ ನಿರ್ಧಾರ ತೆಗೆದುಕೊಳ್ಳಿ. ನನ್ನ ಆದೇಶಕ್ಕೆ ಕಾಯಬೇಡಿ. ನೀವು ಏನೇ ನಿರ್ಧಾರ ತೆಗೆದುಕೊಂಡರೂ ನನ್ನ ಸಹಮತ ಇರುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: Heavy rain- state-  CM BS yeddyurappa-  instructs – Ministers

 

website developers in mysore