ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಆಗ್ರಹ: ರಸ್ತೆ ತಡೆದು ರೈತರಿಂದ ಪ್ರತಿಭಟನೆ

ಮೈಸೂರು,ನವೆಂಬರ್,05,2020(www.justkannada.in) : ರೈತ ವಿರೋಧಿ ಮಸೂದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ನೂರಾರು ರೈತರಿಂದ ಮೈಸೂರು ಊಟಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ.jk-logo-justkannada-logoಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಮೇರೆಗೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರಸ್ತೆ ತಡೆ ಚಳುವಳಿ ನಡೆಸಲಾಯಿತು.

ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ  ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಹೆದ್ದಾರಿ ಸಂಚಾರ ತಡೆ  ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಲಾಯಿತು.Highway-blockade-farmers-protest-anti-farmer-bills

ಎಪಿಎಂಸಿ ಬಳಿಯ  ಸರ್ಕಲ್ ನ‌ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಯ್ದೆಗಳ ಗೆಜೆಟ್ ಸುಡುವ ಮೂಲಕ ರೈತಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಕ್ಷಣ ಕಾಯ್ದೆಗಳನ್ನ ಹಿಂಪಡೆಯುವಂತೆ ಒತ್ತಾಯಿಸಿದರು.Highway-blockade-farmers-protest-anti-farmer-bills

key words : Highway-blockade-farmers-protest-anti-farmer-bills