ಕಾಂಗ್ರೆಸ್ ನವರದ್ಧು ಹಿಟ್ ಅಂಡ್ ರನ್ ಸಂಸ್ಕೃತಿ: ಸಿದ್ಧರಾಮಯ್ಯ ಮೂಲೆಗುಂಪಾಗುತ್ತಿದ್ದಾರೆ- ಶಾಸಕ ಎಂ.ಪಿ ರೇಣುಕಾಚಾರ್ಯ.

ಬೆಂಗಳೂರು,ನವೆಂಬರ್,17,2021(www.justkannada.in): ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್ ನವರದ್ಧು ಹಿಟ್ ಅಂಡ್ ರನ್ ಸಂಸ್ಕೃತಿ, ಅಧೀವೇಶನದಲ್ಲಿ ಚರ್ಚೆಗೆ ಬರ್ತೀರಾ ಬನ್ನಿ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಿಮ್ಮ ಅವಧಿಯಲ್ಲಿ ಪೊಲೀಸರು ತಪ್ಪು ಮಾಡಿದ್ರರು. ಆದರೂ ನೀವು ಯಾಕೆ ಕ್ರಮಕೂಗೊಳ್ಳಲಿಲ್ಲ.  ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ.  ಹೆಸರು ಇಲ್ಲದಂತಾಗಿದೆ. ಕಾಂಗ್ರೆಸನವರು 2 ತಲೆಯ ಹಾವಿದ್ದಂತೆ ಎಂದು ವಾಗ್ದಾಳಿ ನಡೆಸಿದರು.

ಸಿದ್ಧರಾಮಯ್ಯ ಭಾಷಣ ಅರ್ಧಕ್ಕೆ ನಿಲ್ಲಿಸಿದ ಘಟನೆ ಕುರಿತು ಪ್ರತಿಕ್ರಿಯಿಸಿದ ರೇಣುಕಾಚಾರ್ಯ,  ಜಮೀರ್ ಅಹ್ವಾನ ನೀಡಿಲ್ಲ ಅಂತಾ ಗಲಾಟೆ ಮಾಡಿದ್ದಾರೆ. ಕಾಂಗ್ರೆಸ್ ನವರು ಅಲ್ಪಸಂಖ್ಯಾತರನ್ನ ಬಳಸಿ ಎಸೆಯುತ್ತಿದ್ದಾರೆ. ಸಿದ್ಧರಾಮಯ್ಯ ಮೂಲೆಗುಂಪಾಗುತ್ತಿದ್ದಾರೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ನುಡಿದರು.

Key words: Hit and run culture-congress- bjp MLA -MP Renukacharya.