ನಾನು ಸಿಎಂ ಸ್ಥಾನದ ರೇಸ್ ನಲ್ಲಿ ಇಲ್ಲವೇ ಇಲ್ಲ-  ಕೆ.ಎಚ್ ಮುನಿಯಪ್ಪ.

ಬೆಂಗಳೂರು,ಏಪ್ರಿಲ್,26,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಇದ್ದು ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ರೇಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ಮಾಜಿ ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿದ್ದಾರೆಂಬ ಮಾತುಗಳು ಕೇಳಿ ಬಂದಿದೆ.

ಈ ಕುರಿತು ತಾವು ಸಹ ಸಿಎಂ ಸ್ಥಾನದ ರೇಸ್ ನಲ್ಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ದೇವನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಮುನಿಯಪ್ಪ, ನಾನು ಸಿಎಂ ಸ್ಥಾನದ ರೇಸ್ ನಲ್ಲಿ ಇಲ್ಲವೇ ಇಲ್ಲ. ದಲಿತ ಮುಖ್ಯಮಂತ್ರಿ ವಿಷಯ ಈಗ ಅಪ್ರಸ್ತುತ. ಕಾಂಗ್ರೆಸ್ ಪಕ್ಷದ ಸೂಚನೆಯಂತೆ ನಾನು ಕೆಲಸ ಮಾಡುತ್ತಿದ್ದೇನೆ  ಎಂದಿದ್ದಾರೆ.

Key words: I am -not – race – post of CM – KH Muniappa.