• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Search
Friday, May 9, 2025
Sign in
Welcome! Log into your account
Forgot your password? Get help
Create an account
Privacy Policy
Create an account
Welcome! Register for an account
A password will be e-mailed to you.
Privacy Policy
Password recovery
Recover your password
A password will be e-mailed to you.
Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
vtu
  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Home Front Page ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ- ನೂತನ ಕಚೇರಿ, ಲಾಂಛನ ಉದ್ಘಾಟನೆ ಬಳಿಕ...
  • Front Page
  • News
  • Politics

ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ- ನೂತನ ಕಚೇರಿ, ಲಾಂಛನ ಉದ್ಘಾಟನೆ ಬಳಿಕ ಸಿಎಂ ಬಿಎಸ್ ವೈ ಹೇಳಿಕೆ….

By
JK Desk
-
2020-06-10
Facebook
Twitter
Pinterest
WhatsApp

    ಬೆಂಗಳೂರು,ಜೂ,10,2020(www.justkannada.in): ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

    ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ  ಮತ್ತು ಜಾಲತಾಣ ವನ್ನು ಉದ್ಘಾಟನೆ ‌ಮಾಡಿದರು. ಈ ಸಂದರ್ಭದಲ್ಲಿ ‌ ಮಂಡಳಿಯ ಅಧ್ಯಕ್ಷರಾದ ಸಚ್ಚಿದಾನಂದ‌ಮೂರ್ತಿ  ಸಚಿವರಾದ ಆರ್ ಅಶೋಕ್. ರಮೇಶ್ ಜಾರಕಿಹೊಳಿ. ಅಶ್ವಥ್ ನಾರಾಯಣ್. ಸಂಸದರಾದ ತೇಜಸ್ವಿ ಸೂರ್ಯ ರಾಜಕೀಯ ಕಾರ್ಯದರ್ಶಿ ಗಳಾದ ವಿಶ್ವನಾಥ್ ‌ಶಂಕರ್ ಗೌಡ ಪಾಟೀಲ್ ಶಾಸಕರಾದ ರಾಜು ಗೌಡ ರಾಮದಾಸ್ ರವಿಸುಬ್ರಮಣ್ಯ. ಅರ್.ವಿ ದೇಶಪಾಂಡೆ ಮುಖಂಡರಾದ ಎಂಟಿಬಿ‌ ನಾಗರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಲಾಂಛನ ಹಾಗೂ ಜಾಲತಾಣವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ಯಾವುದೇ ಒಂದು ಸಮುದಾಯವನ್ನು ಸಾರಾಸಗಟಾಗಿ ಮುಂದುವರೆದ ಸಮುದಾಯ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಸಮುದಾಯಗಳಲ್ಲೂ ಮುಂದುವರೆದವರು ಮತ್ತು ಹಿಂದುಳಿದವರು ಇರುತ್ತಾರೆ. ಅದೇ ರೀತಿ ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯ   ಎಂದು ಗುರುತಿಸಿದ್ದರೂ, ಆರ್ಥಿಕವಾಗಿ ಅಶಕ್ತರಾಗಿರುವ ಹಲವಾರು ಮಂದಿ ಈ ಸಮುದಾಯದಲ್ಲಿದ್ದಾರೆ. ಅಂತಹವರ ಅಭ್ಯುದಯಕ್ಕಾಗಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು. ದೇಶದ ಇತಿಹಾಸದಲ್ಲಿ ಬ್ರಾಹ್ಮಣ ಸಮುದಾಯದವರ ಕೊಡುಗೆ ಉಲ್ಲೇಖಾರ್ಹವಾದುದು. ವಿಶೇಷವಾಗಿ ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಈ ಸಮುದಾಯದ ಸಾಧನೆ ಅದ್ವಿತೀಯವಾದುದು ಎಂದು ಶ್ಲಾಘಿಸಿದರು.

    ಶ್ರೀ ಶಂಕರಾಚಾರ್ಯರು, ಶ್ರೀ ರಾಮಾನುಜಾಚಾರ್ಯರು, ಶ್ರೀ ಮಧ್ವಾಚಾರ್ಯರಂತಹ   ಗುರುಶ್ರೇಷ್ಠರ ತತ್ವ ಹಾಗೂ ಆದರ್ಶಗಳ ಹಾದಿಯಲ್ಲಿ ನಡೆದು ಸಮಾಜ ಒಳಿತನ್ನು ಕಂಡಿದೆ. ವೇದೋಪನಿಷತ್ತುಗಳನ್ನು ಅಭ್ಯಸಿಸುವ ಮೂಲಕ ಆಧ್ಯಾತ್ಮಿಕತೆಯನ್ನು ಮನುಕುಲಕ್ಕೆ ವಿಪ್ರ  ಸಮಾಜ ಭೋದಿಸುತ್ತಾ ಬಂದಿದೆ. ಬ್ರಾಹ್ಮಣ ಸಮುದಾಯವು ಸಾವಿರಾರು ವರ್ಷಗಳ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಅಪೂರ್ವ ಕೊಡುಗೆ ನೀಡಿದೆ. ಬ್ರಾಹ್ಮಣ ಸಮುದಾಯ ಹಣ, ಆಸ್ತಿ, ಸಂಪತ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದು ಸಿಎಂ ಬಿಎಸ್ ವೈ ನುಡಿದರು.

    ಅಶಕ್ತರಾದ ಬ್ರಾಹ್ಮಣರು ಆರ್ಥಿಕವಾಗಿ ಸಶಕ್ತರಾಗಲು ಮಂಡಳಿಯ ವತಿಯಿಂದ ಅನೇಕ ವಿಭಿನ್ನ ಯೋಜನೆಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಅವರ ಜೀವನ ಮಟ್ಟವನ್ನು ಸುಧಾರಿಸಲು ಯೋಜನೆಗಳು ಸಹಕಾರಿಯಾಗಲಿದೆ. ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲಾಗಿದೆ.  ಅನಾಥ, ನಿರಾಶ್ರಿತ ಅಂಗವಿಕಲ / ವಿಧವೆ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ, ವೃದ್ಧಾಶ್ರಮ, ವೈದ್ಯಕೀಯ ತಪಾಸಣೆ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯಗಳನ್ನು ಒದಗಿಸುವ ಸದುದ್ದೇಶ ಸ್ವಾಗತಾರ್ಹ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

    ಸಮುದಾಯದವರಿಗಾಗಿ ಸಾಮೂಹಿಕ ವಿವಾಹ, ಉಪನಯನ ಆಯೋಜನೆ ಸೇರಿದಂತೆ ಯುವ ಪೀಳಿಗೆಯ ಸಂಘಟನೆಗೆ ಅಭಿವೃದ್ಧಿ ಉತ್ಸವಗಳನ್ನು ಆಯೋಜಿಸುವುದು ಇತ್ಯಾದಿ ಪ್ರಶಂಸಾರ್ಹ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ  ನೀಡುವ ಯೋಜನೆಗಳಿವೆ. ಈ ಎಲ್ಲ ಯೋಜನೆಗಳು ಸಮುದಾಯದವರ ಉನ್ನತಿಗಾಗಿ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಿಎಂ ಬಿಎಸ್ ವೈ ಸಲಹೆ ನೀಡಿದರು.

    ಕರ್ನಾಟಕದಲ್ಲಿ ಬ್ರಾಹ್ಮಣರ ಜನಸಂಖ್ಯೆ ಅಂದಾಜು ಶೇಕಡಾ 3 ರಷ್ಟಿದ್ದು, ಬ್ರಾಹ್ಮಣ ಸಮುದಾಯದ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಹಳೇಬೀಡು ಶ್ಯಾಮಣ್ಣ ಸಚ್ಚಿದಾನಂದ ಮೂರ್ತಿ ಅವರ ನೇತೃತದಲ್ಲಿ ಸಮುದಾಯ ಸರ್ವತೋಮುಖ ಅಭಿವೃದ್ಧಿ ಹೊಂದಲಿದೆ ಎಂದು ಭಾವಿಸಿದ್ದೇನೆ.  20. ಮಂಡಳಿಯ ನೂತನ ಕಚೇರಿ ಹಾಗೂ ಜಾಲತಾಣ ಬ್ರಾಹ್ಮಣ ಸಮುದಾಯಕ್ಕೆ ಉಪಯುಕ್ತವಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ ವೈ ಶುಭ ಹಾರೈಸಿದರು.

    Key words: Inauguration – new office -logo -website -Karnataka State Brahmin Development Board-CM BS yeddyurappa

     

    • TAGS
    • CM BS Yeddyurappa
    • Inauguration - new office
    • Karnataka State Brahmin Development Board
    • logo
    • website
    Facebook
    Twitter
    Pinterest
    WhatsApp
      Previous articleತಮ್ಮನ್ನ ಕೊಚ್ಚೆಗುಂಡಿ ಎಂದಿದ್ಧ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಗೆ ಅವರದ್ಧೇ ಧಾಟಿಯಲ್ಲಿ ಟಾಂಗ್ ಕೊಟ್ಟ ಶಾಸಕ ಸಾ.ರಾ.ಮಹೇಶ್.
      Next articleಮೈಮುಲ್‌ನಲ್ಲಿ ಅಕ್ರಮ ನೇಮಕಾತಿ ಆರೋಪ ವಿಚಾರ: ಕೋರ್ಟ್ ತಡೆಯಾಜ್ಞೆಯಿಂದ ನಮಗೆ ತಾತ್ಕಾಲಿಕ ಜಯ- ಸಾ.ರಾ ಮಹೇಶ್…
      JK Desk

      RELATED ARTICLESMORE FROM AUTHOR

      ಜಿ.ಟಿ.ಟಿ.ಸಿ ಕೇಂದ್ರದಲ್ಲಿ ವಿವಿಧ ಕೋರ್ಸ್ ಗಳಿಗೆ ಮೇ 15ರೊಳಗೆ ಅರ್ಜಿ ಸಲ್ಲಿಸಿ

      ʼಎʼ ಮತ್ತು ʼಬಿʼ ಅಧಿಕಾರಿಗಳಿಗೆ ಉನ್ನತ ಮಟ್ಟದ ತರಬೇತಿ ನಮ್ಮ ರಾಜ್ಯದ ಹೆಮ್ಮೆಯ ವಿಷಯ- CS ಶಾಲಿನಿ ರಜನೀಶ್

      ಮೇ 26ರಿಂದ SSLC ಪರೀಕ್ಷೆ-2 : ನೋಂದಣಿಗೆ ನಾಳೆಯೇ ಕಡೇ ದಿನ

      Sponsor Ads 1

      Sponsor Ads 2

      Sponsor Ads 3

      Sponsor Ads 4

      EDITOR PICKS

      BREAKING NOW: ಉದಯಗಿರಿ “ ಪ್ರಚೋಧನಕಾರಿ ಪೋಸ್ಟ್‌ “: ಜಾಮೀನು ಕೋರಿ ಕೋರ್ಟ್‌ ಮೊರೆ...

      2025-02-13

      5 ವರ್ಷದಲ್ಲಿ 20 ಲಕ್ಷ ಉದ್ಯೋಗ : ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ...

      2025-02-11

      ಜಾಗತಿಕ ಹೂಡಿಕೆದಾರರ ಸಮಾವೇಶ : 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ...

      2025-02-11

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      2020-03-30

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      2019-06-16

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      2021-01-05

      POPULAR CATEGORY

      • Front Page42466
      • News42450
      • Politics24740
      • Crime3848
      • Cinema3496
      • Sports1300
      • Tenders415
      • Media Masala360
      Just Kannada
      ABOUT US
      Just Kannada is a global platform for all issues related to Kannada. At the very root, it’s a news-driven portal. Everything that’s happening in Karnataka, or whatever that’s happening anywhere in the world that has any consequence to Karnataka, is updated here every minute.
      Contact us: info@justkannada.in
      • Terms & Conditions
      • Privacy Policy
      • Refund Policy
      • Grievances
      • Statistics
      • Contact

      Copyright © 2017- . All Rights Reserved: Just Kannada - News 24x7 | Hosted by: DIGICUBE SOLUTIONS

      Subscribe to our News Service @ Just Rs. 399/- per Year and Get Daily Updates Directly to Your Mobile Phones     Subscribe Now | Checkout