ಸಂಕ್ರಾಂತಿ ದಿನವೇ ಹೆಚ್ಚಿದ ಕೊರೊನಾ ಸೋಂಕು: ರಾಜ್ಯದಲ್ಲಿ ಒಂದೇ ದಿನ 32,793 ಪ್ರಕರಣ

ಬೆಂಗಳೂರು, ಜನವರಿ 16, 2022 (www.justkannada.in): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಮಹಾಸ್ಫೋಟ ಸಂಭವಿಸಿದೆ. ಕೊರೊನಾವೈರಸ್ ಪಾಸಿಟಿವಿಟಿ ದರ ಶೇ.15ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 32,793 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 7 ಮಂದಿ ಪ್ರಾಣ ಬಿಟ್ಟಿದ್ದು, 4,273 ಸೋಂಕಿತರು ಗುಣಮುಖರಾಗಿದ್ದಾರೆ.

ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3186040ಕ್ಕೆ ಏರಿಕೆಯಾಗಿದೆ. ಈವರೆಗೂ 2977743 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 38418ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 22284 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1395736ಕ್ಕೆ ಏರಿಕೆಯಾಗಿದೆ. 5 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16448ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 129112 ಸಕ್ರಿಯ ಪ್ರಕರಣಗಳಿವೆ.