ಆರ್ ಎಸ್ ಎಸ್ ಇಲ್ಲವೆಂದಿದ್ದರೇ ಭಾರತ ಪಾಕಿಸ್ತಾನ ಆಗುತ್ತಿತ್ತು- ಹೆಚ್.ಡಿಕೆ ಮತ್ತು ಸಿದ್ಧರಾಮಯ್ಯಗೆ ಸಚಿವ ಪ್ರಭು ಚೌಹಾಣ್ ತಿರುಗೇಟು.

ಬೆಂಗಳೂರು,ಅಕ್ಟೋಬರ್,6,2021(www.justkannada.in):  ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ಧ ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯಗೆ ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಭು ಚೌಹಾಣ್ ತಿರುಗೇಟು ಕೊಟ್ಟಿದ್ದಾರೆ. RSS ಇಲ್ಲವೆಂದಿದ್ದರೆ ಭಾರತ ಪಾಕಿಸ್ತಾನ ಆಗುತ್ತಿತ್ತು. ಪಾಕಿಸ್ತಾನ, ತಾಲಿಬಾನ್ ಎಲ್ಲವೂ ಕಾಂಗ್ರೆಸ್‌ನವರೇ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದನ್ನ ಸಹಿಸಲು ಆಗದೆ ಹೀಗೆಲ್ಲಾ ಮಾತನಾಡ್ತಿದ್ದಾರೆ ಎಂದು ಕಿಡಿಕಾರಿದರು.

ಆರ್ ಎಸ್ ಎಸ್ ದೇಶಭಕ್ತಿಯ ಸಂಸ್ಥೆ, ದೇಶದ ಪರ ಕೆಲಸ ಮಾಡ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾವೆಲ್ಲ ಒಂದು ಅಂತಿದ್ದಾರೆ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಲಿ. ಮಾಜಿ ಸಿಎಂ ಹೇಗೆ ಮಾತಾಡಬೇಕೆಂದು ತಿಳಿದುಕೊಳ್ಳಲಿ. ಆರ್‌ಎಸ್‌ಎಸ್‌ ಏನು ಎಂಬುದು ಜನರಿಗೆ ಗೊತ್ತಿದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹೇಳಿಕೆ ಖಂಡಿಸುತ್ತೇನೆ. ಆರ್‌ಎಸ್‌ಎಸ್‌ ಇರೋದಕ್ಕೆ ದೇಶ ಇದೆ  ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ಧಾರೆ.

Key words: India –becoming- Pakistan- without – RSS -Minister -Prabhu Chauhan