ಭಾರತ- ಚೀನಾ ಸಂಘರ್ಷ: ಜೂ.19ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ…

ನವದೆಹಲಿ,ಜೂ,17,2020(www.justkannada.in):  ಲಡಾಖ್  ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ  ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಜೂನ್ 19 ರಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಜತೆ ಪ್ರಧಾನಿ ಮೋದಿ ಭಾರತ ಮತ್ತು ಚೀನಾ ಸೈನಿಕರ ಸಂಘರ್ಷ ವಿಚಾರ ಕುರಿತು ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.india-china-conflict-prime-minister-narendra-modi-all-party-meeting

ಲಡಾಖ್ ಗಡಿಯಲ್ಲಿ ಚೀನಾ ಕಳೆದ ಕೆಲ ದಿನಗಳಿಂದ  ಎಲ್ಲೆ ಮೀರಿ ವರ್ತನೆ ಮಾಡುತ್ತಾ ಬಂದಿತ್ತು. ಅದರಂತೆ ನಿನ್ನೆ ರಾತ್ರಿ ಚೀನಾ ಸೈನಿಕರು ಭಾರತದ ಗಡಿಯನ್ನ ದಾಟಿ ಬಂದಿದ್ದರು. ಈ ವೇಳೆ ಭಾರತೀಯ ಯೋಧರು ಅವರನ್ನ ತಡೆದು ಹಿಂದೆ ಸರಿಯುವಂತೆ ಹೇಳಿದ್ದರು. ಈ ವೇಳೆ ಭಾರತೀಯ ಸೇನೆ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಈ ವೇಳೆ ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: India-China- conflict-Prime Minister- Narendra Modi – all-party- meeting