“ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ” : ಸಿಎಂ ಬಿ.ಎಸ್.ಯಡಿಯೂರಪ್ಪ

ಮೈಸೂರು,ಜನವರಿ,11,2021(www.justkannada.in) : ಸಚಿವ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ. ಅದು ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಅದು ಅವತ್ತಿಗೆ ಗೊತ್ತಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.jk-logo-justkannada-mysoreಸುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ.13ರ ಮಧ್ಯಾಹ್ನ ಅಮಾವಾಸ್ಯೆ ಕಳೆಯುತ್ತದೆ. ಆ ನಂತರ ಒಳ್ಳೆಯ ಸಮಯ ಅಂತ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸಮಯ ಕೇಳಿಕೊಂಡು ನಿಮಗೂ ಸಮಯ ತಿಳಿಸುತ್ತೇವೆ ಎಂದರು.January-13th or 14th-Volume-expansion-Certain-CM B.S. Yeddyurappa

ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ಮಾಡಬೇಕು ಎಂದು ಕೊಂಡಿದ್ದೇನೆ. ಹಣಕಾಸು ಪರಿಸ್ಥಿತಿ ತಕ್ಕಂತೆ ಸೂಕ್ತವಾದ ನಿರ್ಧಾರ ತೆಗೆದುಕೊಂಡು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು.

key words : January-13th or 14th-Volume-expansion-Certain-CM B.S. Yeddyurappa