ಮೈಸೂರಿನ ನಾಲ್ವರು ಸಾಧಕರಿಗೆ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….

ಮೈಸೂರು,ಅಕ್ಟೋಬರ್,28,2020(www.justkannada.in): ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಲಾಗಿದ್ದು,  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 65 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.jk-logo-justkannada-logo

ಈ ನಡುವೆ ಮೈಸೂರಿನ ನಾಲ್ವರು ಸಾಧಕರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಧ್ವಿ ಪತ್ರಿಕೆಯ ಸಂಪಾದಕ ಸಿ.ಮಹೇಶ್ವರನ್, ಶಿಕ್ಷಣ ಕ್ಷೇತ್ರದ ಡಾ. ಪುಟ್ಟಸಿದ್ದಯ್ಯ, ಆಯುರ್ವೇದ ವೈದ್ಯರಾದ ಡಾ. ಚಂದ್ರಶೇಖರ್  ಹಾಗೂ ಶಿಲ್ಪಕಲೆ ವಿಭಾಗದಲ್ಲಿ ಜನಾರ್ದನ ಮೂರ್ತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ ಲಭಿಸಿದೆ.kannada-rajyotsava-award-four-achievers-mysore

ಕೊರೋನಾ ಹಿನ್ನೆಲೆ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಮುಂದಾಗಿರುವ ಸರ್ಕಾರ ಇದೀಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದವರ ಪಟ್ಟಿ ಬಿಡುಗಡೆ ಮಾಡಿದೆ. ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ.

Kley words: Kannada Rajyotsava -Award -four achievers – Mysore