ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ. ಎಚ್.ಆರ್. ತಿಮ್ಮೇಗೌಡ ಆಯ್ಕೆ.

ಮೈಸೂರು, ಅಕ್ಟೋಬರ್,27,2022(www.justkannada.in):  ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಎಸ್‌ಬಿ ಆರ್‌ ಆರ್  ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಎಚ್‌.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವ ವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’, ಕೊಳಲದನಿ’, `ಸಂವೇದನೆ , `ಭಾರತೀಯ ಕಾವ್ಯಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ, `ಸಂಕ್ಷಿಪ್ತ ಶಬ್ದಮಣಿದರ್ಪಣ’, `ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ.

ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್‌.ಎಸ್‌.ಎಸ್‌ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ, ‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ.

Key words: Karnataka- folk –council-mysore- district -president – H.R. Thimmegowda