ಸೆಪ್ಟೆಂಬರ್ ಮೊದಲ ವಾರದಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಚಿಂತನೆ

ಬೆಂಗಳೂರು, ಆಗಸ್ಟ್ 10, 2021 (www.justkannada.in): ಸೆಪ್ಟೆಂಬರ್ ಮೊದಲ ವಾರದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಕೋವಿಡ್ -19 ಹಿನ್ನೆಲೆಯಲ್ಲಿ ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಅಧಿವೇಶನ ನಡೆದಿತ್ತು.

ಸಂವಿಧಾನ 174ನೇ ನಿಯಮಗಳ ಪ್ರಕಾರ ಆರು ತಿಂಗಳಿಗೊಮ್ಮೆ ಅಧಿವೇಶನವನ್ನು ನಡೆಸಬೇಕಿದೆ. ಹೀಗಾಗಿ ಸರ್ಕಾರ ಸೆಪ್ಟೆಂಬರ್ 24ರೊಳಗಾಗಿ ಅಧಿವೇಶನವನ್ನು ನಡೆಸಬೇಕಿದೆ.