ಇಬ್ಬರು ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನದ ಭಾಗ್ಯ: ನಾಳೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂನ್ 13, 2019 (www.justkannada.in): ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಪಕ್ಷೇತರ ಶಾಸಕರಿಬ್ಬರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸಲಿದ್ದಾರೆ.

ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಸ್ತುತ ಮೂರು ಸಚಿವ ಸ್ಥಾನಗಳು ಖಾಲಿ ಉಳಿದಿವೆ. ಎರಡು ಜೆಡಿಎಸ್ ಪಾಲಿನ ಸಚಿವ ಸ್ಥಾನಗಳಾದರೆ, ಒಂದು ಕಾಂಗ್ರೆಸ್‍ನ ಪಾಲಿನದಾಗಿದೆ. ಆಡಳಿತ ಪಕ್ಷಗಳು ತಲಾ ಒಂದು ಸಚಿವ ಸ್ಥಾನವನ್ನು ಪಕ್ಷೇತರಿಗೆ ನೀಡಲು ಉದ್ದೇಶಿಸಲಾಗಿದೆ ಎನ್ನಲಾಗಿದೆ.