ಕಾಶ್ಮೀರದ ಪುಲ್ವಾಮಾ ‘ರಕ್ಷಕ್ ಕಾರ್ಯಾಚರಣೆ’ಯಲ್ಲಿ ಕರ್ನಾಟಕದ ಯೋಧ ಹುತಾತ್ಮ

kannada t-shirts

ಬೆಂಗಳೂರು, ಜುಲೈ 04, 2021 (www.justkannada.in): ವಿಜಯಪುರ ಮೂಲದ ಯೋಧ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾಗಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶೀರಾಯ ಬೊಮ್ಮನಹಳ್ಳಿ, ಕಳೆದ ಜುಲೈ 2 ರಂದು ಪುಲ್ವಾಮಾದಲ್ಲಿ ನಡೆದ ರಕ್ಷಕ್ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ. ಪಾರ್ಥಿವ ಶರೀರ ಇಂದು ಹುಟ್ಟೂರು ತಲುಪಲಿದೆ.

ಇಂದು ವಿಜಯಪುರದಿಂದ ಯೋಧನ ಸ್ವಗ್ರಾಮದವರೆಗೆ ಮೆರವಣಿಗೆ ನಡೆಸಿ, ನಂತರ ಉಕ್ಕಲಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

website developers in mysore