ಕೆಪಿಟಿಸಿಎಲ್ ನೇಮಕಾತಿ ಅಕ್ರಮ ಪ್ರಕರಣ: 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು.

ಬೆಳಗಾವಿ,ಅಕ್ಟೋಬರ್,18,2022(www.justkannada.in):  ಕೆಪಿಟಿಸಿಎಲ್  ಕಿರಿಯ ಸಹಾಯಕ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 20 ಮಂದಿ ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಕಿಂಗ್ ಪಿನ್ ಸಂಜು ಭಂಡಾರಿ ಸೇರಿ 20 ಮಂದಿಗೆ ಷರತ್ತುಬದ್ಧ ಜಾಮೀನು ನೀಡಿ ಬೆಳಗಾವಿಯ ಗೋಕಾಕ್ ನ 2ನೇ ಜೆಎಂಎಫ್ ಸಿ ಕೋರ್ಟ್ ಆದೇಶಿಸಿದೆ.  ಆಗಸ್ಟ್ 7 ರಂದು ಗೋಕಾಕ್ ನ ಜಿಎಸ್ ಎಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆಸಲಾಗಿತ್ತು.

ಪ್ರಕರಣ ಸಂಬಂಧ ಸಿದ್ಧಪ್ಪ ಮದಹಳ್ಳಿಯನ್ನ ಪೊಲೀಸರು ಬಂಧಿಸಿದ್ದರು. ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ಧ ಎನ್ನಲಾಗಿದೆ.

Key words: KPTCL- Recruitment -Illegal –Case- 20 Accused –Granted- Conditional Bail.