ಕೆ.ಆರ್ ಎಸ್ ಭರ್ತಿಯಾಗಲು ಇನ್ನ ಕೇವಲ ಒಂದು ಅಡಿ ಮಾತ್ರ ಬಾಕಿ….

ಮಂಡ್ಯ,ಆ,13,2020(www.justkannada.in):  ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಒಳಹರಿವು ಹೆಚ್ಚಳವಾದ ಹಿನ್ನೆಲೆ ಕೆ.ಆರ್ ಎಸ್ ಜಲಾಶಯ ಭರ್ತಿಗೆ ಇನ್ನ ಒಂದೇ ಅಡಿ ಮಾತ್ರ ಬಾಕಿ ಇದೆ.jk-logo-justkannada-logo

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಇಂದು ಸಂಜೆ ವೇಳೆಗೆ ಭರ್ತಿಯಾಗುವ ಸಾಧ್ಯತೆ ಇದೆ. 124.80 ಅಡಿ ಗರಿಷ್ಠ ಸಾಮರ್ಥ್ಯ ವನ್ನ ಕೆಆರ್ಎಸ್ ಜಲಾಶಯ ಹೊಂದಿದ್ದು  ಪ್ರಸ್ತುತ ನೀರಿನ ಮಟ್ಟ 123 ಅಡಿ ಗಡಿ ದಾಟಿದೆ. ಈ ಮೂಲಕ ಜಲಾಶಯ ಭರ್ತಿಯಾಗಲು ಇನ್ನ ಒಂದು ಅಡಿಯಷ್ಟೇ ಬಾಕಿ ಇದೆ.krs-dam-filled-evening-rain

20,923 ಕ್ಯೂಸೆಕ್  ಒಳಹರಿವಿನ ಪ್ರಮಾಣವಿದ್ದು  ಜಲಾಶಯದಿಂದ 3,756 ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ. ಕೆಆರ್ ಎಸ್ ಜಲಾಶಯ ಗರಿಷ್ಠ 49.454 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ  ಹೊಂದಿದ್ದು, ಜಲಾಶಯದಲ್ಲಿ ಪ್ರಸ್ತುತ 47.038 ಟಿಎಂಸಿ ನೀರು ಸಂಗ್ರಹವಾಗಿದೆ.

Key words: KRS –dam-filled – evening-rain