ಮತ್ತೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ನೌಕರರ ಪ್ರತಿಭಟನೆ ಬೆದರಿಕೆ-ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್…

ಬೆಂಗಳೂರು,ಫೆಬ್ರವರಿ,2,2021(www.justkannada.in): ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರು ಮತ್ತೆ ಪ್ರತಿಭಟನೆಯ  ಬೆದರಿಕೆ ಹಾಕಿದ್ದಾರೆ. ಸರ್ಕಾರ ನೀಡಿದ್ದ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.jk

ಈ ಕುರಿತು ಮಾತನಾಡಿರುವ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್,  ಡಿಸೆಂಬರ್ ನಲ್ಲಿ ನೀಡಿದ್ದ ಭರವಸೆ ಸರ್ಕಾರ ಈಡೇರಿಸಿಲ್ಲ. ಈವರೆಗೆ ಸರ್ಕಾರ ಯಾವುದೇ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.KSRTC- BMTC- employees –protest-Kodihalli Chandrashekhar - deadline - government.

ಜತೆಗೆ ಸರ್ಕಾರಕ್ಕೆ ಮಾರ್ಚ್ 14ರವರೆಗೆ ಸಮಯ ನೀಡಲಾಗುತ್ತದೆ. ಸಾರ್ವಜನಿಕ ಲಿಖಿತ ಉತ್ತರ ನೀಡಬೇಕು.  9 ಬೇಡಿಕೆಗಳನ್ನ ಈಡೇರಿಸಬೇಕು. ಇಲ್ಲದಿದ್ದರೇ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್  ಡೆಡ್ ಲೈನ್ ನೀಡಿದ್ದಾರೆ.

Key words: KSRTC- BMTC- employees –protest-Kodihalli Chandrashekhar – deadline – government.