ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು  ಕೆ.ಎಸ್‌.ಆರ್‌.ಟಿ.ಸಿ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆ ಯತ್ನ..

ಮೈಸೂರು,ಜೂ,14,2019(www.justkannada.in):  ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಕೆ.ಎಸ್‌.ಆರ್‌.ಟಿ.ಸಿ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬಸವರಾಜು ಆತ್ಮಹತ್ಯೆಗೆ ಯತ್ನಿಸಿದ ಕೆ.ಎಸ್‌ಆರ್‌ಟಿಸಿ ವೋಲ್ವೊ ಬಸ್ ಚಾಲಕ. ಬಸವರಾಜು ಅವರು ಬನ್ನಿಮಂಟಪ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ನಡುವೆ  ಮೇಲಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ಚಾಲಕ ಬಸವರಾಜು ಡೆತ್ ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ನಿದ್ರಾಹೀನಾ ಸ್ಥಿತಿಯಲ್ಲಿದ್ದ ಬಸವರಾಜು ಅವರನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Key words: KSRTC -driver cum conductor –attempts- suicide- harassing -mysore