ಬಸ್ ಡಿಪೋದಲ್ಲೇ ಕೆಎಸ್ ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು.

kannada t-shirts

ಕಲಬುರಗಿ,ಸೆಪ್ಟಂಬರ್,10,2022(www.justkannada.in):  ಬಸ್ ಡಿಪೋದಲ್ಲಿ ಕೆಎಸ್ ಆರ್ ಟಿಸಿ ನೌಕರ  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆ ಸೇಡಂನಲ್ಲಿ ನಡೆದಿದೆ.

ಅಫಜಲಪುರ ತಾಲೂಕಿನ ಗುಡೂರ ಗ್ರಾಮದ ಭೀಮಾಶಂಕರ (45 ) ಆತ್ಮಹತ್ಯೆಗೆ ಶರಣಾದ ನೌಕರ. ಡಿಪೋ ಒಳಗಿನ ಸಿಬ್ಬಂದಿ ವಿಶ್ರಾಂತಿ ಕೋಣೆಯ ಹಿಂಬದಿಯಲ್ಲಿರುವ ತಾತ್ಕಾಲಿಕ ಶೆಡ್ ನಲ್ಲಿ  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇವರು ಒಂದು ತಿಂಗಳ ಹಿಂದಷ್ಟೆ ಚಿಂಚೋಳಿಯಿಂದ ಸೇಡಂಗೆ ವರ್ಗಾವಣೆಯಾಗಿ ಬಂದಿದ್ದರು. ಮೇಲಾಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTC –employee- committed- suicide

website developers in mysore