ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಸೇವೆ ಆರಂಭವಾಗಲಿದೆ.

jk-logo-justkannada-logo

ಕೊರೊನಾ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ಜಾರಿಯಾದ ಸಂದರ್ಭ ಕೆಎಸ್ ಆರ್ ಟಿ ಸಿ ಬಸ್ ಸೇವೆ ಸ್ಥಗಿತಗೊಂಡಿತ್ತು. ನಂತರ ಲಾಕ್ ಡೌನ್ ತೆರವಾಗಿದ್ದು ಎಲ್ಲಾ ವ್ಯಾಪಾರ ವ್ಯವಹಾರ ಅನುಮತಿ ನೀಡಲಾಗಿದೆ. ಇದೀಗ ಮಹರಾಷ್ಟ್ರಕ್ಕೆ  ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಿಂದ ಬಸ್ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ.

KSRTC-bus-service-Maharashtra-begin-tomorrow

ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರಕಾಯ್ದುಕೊಳ್ಳುವುದರ ಜೊತೆಗೆ ಟಿಕೆಟ್ ಕಾಯ್ದಿರಿಸುವಂತೆ ಸೂಚಿಸಲಾಗಿದೆ.

key words : KSRTC-bus-service-Maharashtra-begin-tomorrow