ಜಮೀನು ವಿವಾದ: ಇಬ್ಬರ ನಡುವಿನ ಜಗಳ ಬಿಡಿಸಲು ಹೋದ ವ್ಯಕ್ತಿ ಸಾವು….

ಮಂಡ್ಯ,ಮೇ,9,2019(www.justkannada.in):  ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಕುಟುಂಬದ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ವ್ಯಕ್ತಿಯೇ  ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಬಿ. ಹಟ್ನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಶಿವರುದ್ರಪ್ಪ ಮೃತಪಟ್ಟ ವ್ಯಕ್ತಿ.  ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಾಗರಾಜ ಮತ್ತು ಸಂಪತ್ ಕುಮಾರ್ ಎಂಬುವವರ ನಡುವೆ ಜಗಳ ನಡೆಯುತ್ತಿತ್ತು. ಈ ವೇಳೆ ಜಗಳ ಬಿಡಿಸಲು ಬಂದ ಶಿವರುದ್ರಪ್ಪ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ನಾಗರಾಜು ಕಡೆಯಿಂದ ಹಲ್ಲೆ ಮಾಡಿದ್ದು ಈ ವೇಳೇ ಶಿವರುದ್ರಪ್ಪ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶಿವರುದ್ರಪ್ಪ ಸಾವನ್ನಪ್ಪಿದರೂ ಸಹ ಜಗಳ ಮುಂದುವರೆದಿದ್ದು, ನಾಗರಾಜು ಸಂಪತ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Land dispute-death – man –quarrel- between – two-mandya