‘’ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ’’ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ…!

ಬೆಂಗಳೂರು,ಜನವರಿ,02,2020(www.justkananda.in) : ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.jk-logo-justkannada-mysore

ಕರ್ನಾಟಕದಲ್ಲಿ  ‘ಕನ್ನಡಿಗನೇ ಸಾರ್ವಭೌಮ’ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು ಎಂದು ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.

lashes-Pointing-Take-Action-Against-Liability-Former-CM H.D.Kumaraswamy-Advice-Government

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂದು ಹೇಳಿದ್ದಾರೆ.lashes-Pointing-Take-Action-Against-Liability-Former-CM H.D.Kumaraswamy-Advice-Government

ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

key words : lashes-Pointing-Take-Action-Against-Liability-
Former-CM H.D.Kumaraswamy-Advice-Government …!