ಕಬ್ಬಿನ ಗದ್ದೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿ: ಹೋರಾಡಿ ಪ್ರಾಣ ಉಳಿಸಿಕೊಂಡ ರೈತ.

ಮಂಡ್ಯ,ಮೇ,30,2022(www.justkannada.in):  ಬೈಕ್ ನಲ್ಲಿ ಕಬ್ಬಿನ ಗದ್ಧೆಗೆ ತೆರಳುತ್ತಿದ್ದ ವೇಳೆ ರೈತನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ನಡೆದಿದೆ.

ಬೈಕ್ ನಲ್ಲಿ ಗಬ್ಬಿನ ಗದ್ಧೆಗೆ ತೆರಳುತ್ತಿದ್ದ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿದ್ದು ಈ ವೇಳೆ ರೈತ ಚಿರತೆಯೊಂದಿಗೆ 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡಿದ್ದಾರೆ. ರೈತ ಜಗದೀಶ್ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸಹಳ್ಳಿ, ಕೆಂಬೂತನಗೆರೆಯಲ್ಲಿ  ಕಳೆದ ಮೂರು ದಿನಗಳಿಂದ ಚಿರತೆ ದಾಳಿ ಮಾಡುತ್ತಿದ್ದು, ಎರಡು ಮೇಕೆಗಳನ್ನು ಚಿರತೆ ಹೊತ್ತೊಯ್ದಿದೆ. ಆದರೆ ಈ ಬಗ್ಗೆ  ವಿಷಯ ತಿಳಿಸಿದರೂ  ಸಹ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದು,  ಬೋನ್ ಇರಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

Key words: leopard-attacks-farmer-mandya