ಮೇ 3ರವರೆಗೂ ದೇಶದಾದ್ಯಂತ ಲಾಕ್‌ಡೌನ್‌ ಮುಂದುವರಿಕೆ: ಏಪ್ರಿಲ್ 20ರ ಬಳಿಕ ಕೆಲವೆಡೆ ಸಡಿಲಿಕೆ ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು, ಏಪ್ರಿಲ್ 13, 2020 (www.justkannada.in: ಮೇ 3ರ ವರೆಗೂ ದೇಶದಾದ್ಯಂತ ಲಾಕ್‌ಡೌನ್‌ ಮುಂದುವರಿಕೆ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದಿನಗೂಲಿ ನೌಕರರು, ಬಡವರಿಗೆ ಆದ್ಯತೆ ನೀಡಿ, ಅವರ ಜೀವನ ಸುಧಾರಿಸಲು ಮಾರ್ಗದರ್ಶಿ ಸೂತ್ರದಲ್ಲಿ ವಿವರಣೆ ನೀಡಲಾಗುತ್ತದೆ. ‘ಆರೋಗ್ಯ ಸೇತು’ ಮೊಬೈಲ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಿ. ನಾಳೆ (ಏಪ್ರಿಲ್‌ 15) ಸರ್ಕಾರವು ವಿಸ್ತೃತ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಲಿದೆ. ಏಪ್ರಿಲ್‌ 20ರ ವರೆಗೆ ಎಲ್ಲ ರಾಜ್ಯ, ಊರುಗಳಲ್ಲಿ ಕಟ್ಟು ನಿಟ್ಟಿನ ಗಮನವಹಿಸಬೇಕು ಎಂದು ಮೋದಿ ಹೇಳಿದ್ದಾರೆ.

ಇಂದು ಮೋದಿ ಹೇಳಿದ್ದಿಷ್ಟು….

ಈ ಅಗ್ನಿ ಪರೀಕ್ಷೆಯಲ್ಲಿ ಸಫಲವಾಗುವ ಹಾಟ್‌ಸ್ಪಾಟ್‌ಗಳಿಗೆ ಕೊಂಚ ಸಡಿಲಿಕೆ ನೀಡಲಾಗುತ್ತದೆ.

ಅತ್ಯಗತ್ಯ ವಿಷಯಗಳಿಗೆ ಮಾತ್ರ ಅನುಮತಿ ದೊರೆಯಲಿದೆ. ಆದರೆ, ಅದು ಕಟ್ಟುನಿಟ್ಟಾಗಿರುತ್ತದೆ.

ಕೊರೊನಾ ಹಾಟ್‌ಸ್ಪಾಟ್‌ ಆಗಿ ಪರಿಣಮಿಸುವ ಪ್ರದೇಶಗಳನ್ನೂ ಗುರುತಿಸಿ ಕಠೋರ ಕ್ರಮವಹಿಸಬೇಕಿದೆ

ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಾಟ್‌ಸ್ಪಾನ್‌ಗಳಲ್ಲಿ ಹಿಂದಿಗಿಂತಲು ಹೆಚ್ಚಿನ ಗಮನ, ಕಟ್ಟುನಿಟ್ಟಾಗಬೇಕು

ಕೊರೊನಾ ವಿರುದ್ಧ ಯುದ್ಧ ಮುಂದುವರಿಸುವುದು ಹೇಗೆ ಎಂಬ ಬಗ್ಗೆ ರಾಜ್ಯಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ.

ರಾಜ್ಯ ಸರ್ಕಾರಗಳು, ಸ್ಥಳೀಯಾಡಳಿತಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿವೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬೇರೆ ದೇಶಗಳಲ್ಲಿನ ಹಾನಿ ಗಮನಿಸಿದರೆ ಭಾರತವು ಉತ್ತಮ ಸ್ಥಿತಿಯಲ್ಲಿದೆ. ಬೇರೆ ದೇಶಗಳಲ್ಲಿ‌ 25-30 ಪಟ್ಟು ಅಧಿಕವಾಗಿದೆ.

ಸಕಾಲಕ್ಕೆ ಸರಿಯಾದ ನಿರ್ಧಾರ ಕೈಗೊಳ್ಳದೇ ಹೋಗಿದ್ದರೆ ನಾವು ಈ ಸ್ಥಿತಿಯಲ್ಲಿರುವುದು ಸಾಧ್ಯವಾಗುತ್ತಿರಲಿಲ್ಲ.

ಸೋಂಕು ಪ್ರಕರಣಗಳು 550 ದಾಖಲಾಗಿದ್ದಾಗಲೇ 21 ದಿನಗಳ ಲಾಕ್‌ಡೌನ್ ಘೋಷಿಸಲಾಯಿತು. ಇದು ಭಾರಿ ಪ್ರಮಾಣದಲ್ಲಿ ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿತು.

ಸಾಮೂಹಿಕ ಶಕ್ತಿಯ ಪ್ರದರ್ಶನದ ಸಂಕಲ್ಪವೇ ಬಾಬಾ ಸಾಹೇಬರಿಗೆ ಅರ್ಪಿಸುವ ನಿಜವಾದ ಶ್ರದ್ಧಾಂಜಲಿ ನಿಮ್ಮ ಸಹಕಾರದಿಂದ ಕೊರೊನಾ ಒಂದಿಷ್ಟು ಮಟ್ಟಿಗೆ ನಿಯಂತ್ರಣಕ್ಕೆ ಅನುಕೂಲವಾಗಿದೆ.