ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಂದ ಲಂಚ ಪ್ರಕರಣ: ಕಾನೂನು ಕ್ರಮ ಆಗುತ್ತೆ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಬೆಂಗಳೂರು,ಮಾರ್ಚ್,11,2023(www.justkannada.in): ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ತಪ್ಪು ಮಾಡಿದವರಿಗೆ ಕಾನೂನು ಕ್ರಮ ಆಗುತ್ತೆ ಎಂದರು.

ಈ ಕುರಿತು ಇಂದು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಡಾಳ್ ವಿರೂಪಾಕ್ಷಪ್ಪ ತಪ್ಪು ಮಾಡಿದ್ದಾರೆ. ತಪ್ಪು ಮಾಡಿದ್ದವರಿಗೆ ಕಾನೂನು ರೀತಿ ಶಿಕ್ಷೆ ಆಗುತ್ತದೆ . ನಮ್ಮ ಪಕ್ಷ ಈಗಾಗಲೇ ಎಲ್ಲವನ್ನೂ ಹೇಳಿದೆ. ತನಿಖೆ ನಡೆಯುತ್ತಿದೆ. ಕಾನೂನು ಕ್ರಮ ಆಗುತ್ತೆ ಎಂದು ತಿಳಿಸಿದರು.

ನಾಳೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಅಧಿಕೃತ ಉದ್ಘಾಟನೆಯಾಗಲಿದೆ.  ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ದಶಪಥ ಹೆದ್ದಾರಿಯಲ್ಲಿ ಹೋಟೆಲ್ ಗಳಿವೆ.  ಶೀಘ್ರವೇ ಸರ್ವಿಸ್ ರಸ್ತೆ ನಿರ್ಮಿಸಲು ನಿತಿನ್ ಗಡ್ಕರಿ ಅವರು ಹೆದ್ಧಾರಿ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ ಎಂದು ಶೋಭಾ ಕರಂಧ್ಲಾಜೆ ತಿಳಿಸಿದರು.

Key words: Madal Virupakshappa- son-bribe-case- Union Minister- Shobha Karandlaje