ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟ:  ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ.

ಬೆಳಗಾವಿ,ನವೆಂಬರ್,26,2022(www.justkannada.in):  ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ  ಒಲವು ತೋರಿದರೂ ಇತ್ತ  ಕೆಲಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.  ಮಿರಜ್ -ಕಾಗವಾಡ ಮಾರ್ಗಮಧ್ಯೆ ಪುಂಡರು ಕರ್ನಾಟಕ ಬಸ್ ಮೇಲೆ ಕಲ್ಲು ತೂರಿ ಪುಂಡಾಟ ಮೆರೆದಿದ್ದಾರೆ.

ಬೆಳಗಾವಿಯ ಅಥಣಿ ಡಿಪೋಗೆ ಸೇರಿದ ಬಸ್ ಪುಣೆಯಿಂದ ಅಥಣಿಗೆ ಬರುತಿತ್ತು. ಈ ವೇಳೆ ಕೃತ್ಯ ನಡೆದಿದೆ. ಬೆಳಗಾವಿ ಜಿಲ್ಲಾ ಪೋಲೀಸರ ಸೂಚನೆ ಮೇರೆಗೆ  ಅಥಣಿ-ಮಿರಜ್ ನಡುವಿನ ಬಸ್ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ.

Key words: Maharashtra-Karnataka- transport- bus- stone – throw