ಮಾರಮ್ಮನ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮಂಡ್ಯ,ಅಕ್ಟೋಬರ್,28,2020(www.justkannada.in):  ಮಾರಮ್ಮನ ಪ್ರಸಾದ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.jk-logo-justkannada-logo

ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಮಾರಮ್ಮದೇಗುಲದಲ್ಲಿ ಪೂಜೆ ನಡೆಸಲಾಗಿತ್ತು. ಈ ವೇಳೆ  ಪ್ರಸಾದಕ್ಕಾಗಿ ಪುಳಿಯೋಗರೆ ತಯಾರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಗಿತ್ತು. ಈ ವೇಳೆ 200 ಮಂದಿ ಪೈಕಿ 100 ಮಂದಿ ಪ್ರಸಾದ ಸೇವಿಸಿದ್ದರು ಎನ್ನಲಾಗಿದೆ.mandya-more-than-70-people-ill-after-eating-prasada

ಇನ್ನು ಪ್ರಸಾದ ಸೇವಿಸಿದ್ದ 70ಕ್ಕೂ ಹೆಚ್ಚು ಮಂದಿಗೆ ಇಂದು ಅತಿಸಾರವಾಗಿದ್ದು ಅಸ್ವಸ್ಥರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಅಸ್ವಸ್ಥರನ್ನ ಮಳವಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಲಗೂರು ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Key words: mandya-More than -70 people – ill -after -eating -prasada