ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ಮಾಲೀಕನಿಗೆ ಕಾದಿತ್ತು  ಶಾಕ್…

ಮಂಡ್ಯ,ಡಿ,7,2019(www.justkannada.in): ಗಿರವಿ ಅಂಗಡಿ ಮಾಲೀಕನೋರ್ವ ರಾತ್ರಿ ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿ ನಡೆದಿದೆ.

ಪಾಂಡವಪುರ ತಾಲೂಕಿನ ಶಂಭೂನಹಳ್ಳಿ ಬಳಿ ತಡರಾತ್ರಿ ಈ  ಘಟನೆ ನಡೆದಿದೆ. ಜಂಬೂ ಜರೋರಿ ಹಲ್ಲೆಗೊಂಡು  ದರೋಡೆಗೊಳಗಾದ ಗಿರವಿ ಅಂಗಡಿ ಮಾಲೀಕ. ಜಂಬೂ ಜರೋರಿ  ರಾತ್ರಿ ಅಂಗಡಿ ವ್ಯವಹಾರ ಮುಗಿಸಿ ವಾಪಸ್ಸು ಹೋಗುತ್ತಿದ್ದ ವೇಳೆ  ದುಷ್ಕರ್ಮಿಗಳು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ

ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು   ಮಾಲೀಕನ ಬಳಿ ಇದ್ದ ಚಿನ್ನಾಭರಣ ಸೇರಿದಂತೆ ಹಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ  ಪರಿಶೀಲಿಸಿದ್ದಾರೆ. ಈಕುರಿತು ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: mandya- Shock -waiting – owner-returning – shop.