ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಮತ್ತು ಮರಾಠಿ ಪ್ರಾಧಿಕಾರ ರದ್ದುಪಡಿಸುವಂತೆ ಆಗ್ರಹ: ವಾಟಾಳ್ ನಾಗರಾಜ್ ಪ್ರತಿಭಟನೆ…

ಮೈಸೂರು,ಡಿಸೆಂಬರ್,22,2020(www.justkannada.in): ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಹಾಗೂ ಮರಾಠಿ ಪ್ರಾಧಿಕಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.Marathi development-corporation- cancel- protest- vatal nagaraj- mysore

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಮತ್ತು ಮರಾಠಿ ಪ್ರಾಧಿಕಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಜನವರಿ 9 ರಂದು ರಾಜ್ಯದ ಒಂದು ಸಾವಿರ ಕಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ…Marathi development-corporation- cancel- protest- vatal nagaraj- mysore

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್,  ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಲಾಭಕ್ಕಾಗಿ ಮರಾಠಿ ಪ್ರಾಧಿಕಾರ ರಚನೆ ಮಾಡಿದ್ದಾರೆ. ಮರಾಠಿ ಪ್ರಾಧಿಕಾರವನ್ನು ಈ ಕೂಡಲೇ ರದ್ದು ಮಾಡಬೇಕು. ಇಲ್ಲದಿದ್ದರೆ ಬರುವ ಜನವರಿ 9 ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು. ಜನವರಿ 9 ರಂದು ರಾಜ್ಯದ ಒಂದು ಸಾವಿರ ಕಡೆ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Key words: Marathi development-corporation- cancel- protest- vatal nagaraj- mysore