ಮೇ 2ರಂದು ಮೆರವಣಿಗೆ ಮತ್ತು ವಿಜಯೋತ್ಸವ ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ…

ನವದೆಹಲಿ,ಏಪ್ರಿಲ್,27,2021(www.justkannada.in):  ಮೇ 2 ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು ಈ ಹಿನ್ನೆಲೆಯಲ್ಲಿ  ಅಂದು ಮೆರವಣಿಗೆ ಮತ್ತು ವಿಜಯೋತ್ಸವವನ್ನು ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.jk

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಸಲಾಗಿದ್ದು ಮೇ 2ರಂದು ಫಲಿತಾಂಶ ಹೊರ ಬೀಳಲಿದೆ. ಹಾಗೆಯೇ ಕರ್ನಾಟಕದ  ಬೀದರ್ ನ ಬಸವಕಲ್ಯಾಣ, ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17 ರಂದು ಮತದಾನ ನಡೆದಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ.may-2-election-commission-orders-restriction-celebration

ಈ ನಡುವೆ ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೇ 2ರ ಚುನಾವಣಾ ಫಲಿತಾಂಶದಂದು ಮೆರವಣಿಗೆ ವಿಜಯೋತ್ಸವ ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

Key words: May 2- Election Commission -orders – Restriction- Celebration