ಹೈಜಾಕ್ ಮಾಡುವುದಕ್ಕೆ ಅದೇನು ಸರ್ಕಾರಿ ಕಾರ್ಯಕ್ರಮನಾ..? ಹೆಚ್.ಡಿಕೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್.

ಬೆಂಗಳೂರು,ಡಿಸೆಂಬರ್,29,2021(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಗ್ಗೆ ಟೀಕಿಸಿ ನಮ್ಮ ಯಾತ್ರೆಯನ್ನ ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ.

ಹೈಜಾಕ್ ಮಾಡುವುದಕ್ಕೆ ಸರ್ಕಾರಿ ಕಾರ್ಯಕ್ರಮನಾ ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆ ಸಂಬಂಧ ಡಿಪಿಆರ್ ಮಾಡಿದ್ದೇವು. ಅದನ್ನು ಜಾರಿ ಮಾಡುವಂತೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿದ್ದೇವೆ. ನಾವ್ಯಾಕೆ ಜೆಡಿಎಸ್ ಕಾರ್ಯಕ್ರಮ ಹೈಜಾಕ್ ಮಾಡೋಣ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿದ್ಧರಾಮಯ್ಯ, ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರಾ.  ಈ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಏಕೆ ಹೊಟ್ಟೆಯುರಿ? ಪಾದಯಾತ್ರೆ ಹೈಜಾಕ್ ಅಂದರೆ ಏನರ್ಥ? ಹೈಜಾಕ್ ಮಾಡಲು ಅದೇನು ಸರ್ಕಾರಿ ಕಾರ್ಯಕ್ರಮವಾಗಿದೆಯಾ? ಎಂದು ಪ್ರಶ್ನಿಸಿದರು.

ಹಾಗೆಯೇ  ಪಾದಯಾತ್ರೆ ಹಗಲಿನಲ್ಲಿ ನಡೆಯುತ್ತೆ ರಾತ್ರಿ  ಇರುವುದಿಲ್ಲ. ಹೀಗಾಗಿ ನೈಟ್ ಕರ್ಫ್ಯೂನಿಂದ ನಮ್ಮ ಪಾದಯಾತ್ರೆಗೆ ತೊಂದರೆ ಇಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: mekedatu-plan-program – hijacking-Former CM- Siddaramaiah -Tong – HD kumaraswamy