ಕನ್ನಡದ ಧ್ವಜ ಹಾರಿಸುತ್ತೇವೆ: ಅದನ್ನು ಕೇಳಲು ಎಂಇಎಸ್‌, ಶಿವಸೇನೆ ಯಾವ ಊರ ದೊಣ್ಣೆ ನಾಯಕರು…? ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ…

kannada t-shirts

ಬೆಂಗಳೂರು,ಜನವರಿ,21,2021(www.justkannada.in): ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ ಎಂದು ಎಂಇಎಸ್‌, ಶಿವಸೇನೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಾಗೆಯೇ  ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು ಎಂದು ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.MES- Shiv Sena - flag –Kannada-Former CM -HD Kumaraswamy

ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ಜಜ ತೆರವಿಗಾಗಿ ಎಂಇಎಸ್‌, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‌ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು.

ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಗೆ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್‌, ಶಿವಸೇನೆ  ನಡೆಸುವ ಪ್ರತಿಭಟನೆಯನ್ನು ಸಮಾಜವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ ಎಂದು ಟ್ವೀಟ್ ಮಾಡಿ ಹೆಚ್.ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ENGLISH SUMMARY…

“We will hoist Kannada flag in Belagavi – Who are MES, Shivsena to ask? former CM HDK
Bengaluru, Jan, 21, 2021 (www.justkannada.in): Former Chief Minister H.D. Kumaraswamy has expressed his fury on MES and Shivasena for its protest on removing the Kannada flag in front of Belagavi Corporation. Kumaraswamy has called the protest anti-national and anti-society.
In his tweet, the former CM has said, “It is our land, our language, and our flag. We have all the rights to hoist the Kannada flag. Who is MES and Shivsena to question us? Their protest is against the community.”
He has demanded the State government to initiate action against the protestors without any hesitation as it is improper.
Keywords: Former CM H.D. Kumaraswamy/ MES/ Shivasena/ Kannada flag/ anti-society

Key words: MES- Shiv Sena – flag –Kannada-Former CM -HD Kumaraswamy

 

website developers in mysore