ಡಿಕೆಶಿ ಪ್ರಚೋದನಕಾರಿ ಹೇಳಿಕೆಯಿಂದ ಕುಮ್ಮಕ್ಕು: ಮುಸಲ್ಮಾನ ಗೂಂಡಾಗಳಿಂದ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ-ಸಚಿವ ಕೆ.ಎಸ್ ಈಶ್ವರಪ್ಪ.

ಬೆಂಗಳೂರು,ಫೆಬ್ರವರಿ, 21,2022 (www.justkannada.in):  ಮುಸಲ್ಮಾನ ಗೂಂಡಾಗಳಿಂದ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆಯಾಗಿದೆ. ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಸಚಿವ ಕೆ,ಎಸ್ ಈಶ್ವರಪ್ಪ ಕಿಡಿಕಾರಿದರು.

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ.  ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ.

ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ. ಸರ್ಕಾರ ತನಿಖೆ ಮಾಡ್ತಿದೆ.  ಶಿವಮೊಗ್ಗಕ್ಕೆ ಈಗಲೇ ಹೊರಟು ಅಲ್ಲಿ ಪರಿಸ್ಥಿತಿ ಬಗ್ಗೆ  ಅವಲೊಕಿಸಲಾಗುವುದು. ತುಂಬಾ ಪ್ರಾಮಾಣಿಕ ಕಾರ್ಯಕರ್ತ ಆತನ ಕೊಲೆ ತುಂಬಾ ನೋವು ತಂದಿದೆ. ಶಿವಮೊಗ್ಗದಲ್ಲಿ ಈ ಗೂಂಡಾಗಿರಿ ಬೆಳೆಯಲು ಬಿಡಲ್ಲ. ದಮನ ಮಾಡ್ತೀವಿ ಇದರ ಬಗ್ಗೆ ಸಿಎಂ ಮತ್ತು  ಗೃಹ ಸಚಿವರ ಜತೆ ಮಾತಾಡುತ್ತೇನೆ ಎಂದರು.

Key words: minister-ks eshwarappa-bajarangadal- murder