ವಜಾಗೊಂಡಿದ್ದ ಸಾರಿಗೆ ನೌಕರರಿಗೆ ನೆಮ್ಮದಿಯ ಸುದ್ದಿ ನೀಡಿದ ಸಚಿವ ಶ್ರೀರಾಮುಲು

ಬೆಂಗಳೂರು, ಜನವರಿ 02, 2021 (www.justkannada.in): ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ನೆಮ್ಮದಿಯ ಸುದ್ದಿ ನೀಡಿದ್ದು, ಶೀಘ್ರವೇ ವಜಾಗೊಂಡ ನೌಕರರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೌಕರರನ್ನು ವಜಾ ಮಾಡಲಾಗಿತ್ತು. ಆ ನೌಕರರ ಕುಟುಂಬಗಳ ಸ್ಥಿತಿ ಗತಿ ನೋಡಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನೌಕರರಿಗೆ ಮತ್ತಷ್ಟು ಸಲಹೆ ನೀಡಿರುವ ಶ್ರೀರಾಮುಲು, ನೌಕರರು ಮುಷ್ಕರದ ಬದಲು ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕು. ಈ ಮೂಲಕ ಸೌಹಾರ್ದಯುತವಾಗಿ ಬೇಡಿಕೆ ಈಡೇರಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.