ಕೆಎಸ್ ಆರ್ ಟಿಸಿ ಬಸ್ ನಿಲ್ಲಿಸಿ ಚಾಲಕನನ್ನ ತರಾಟೆ ತೆಗೆದುಕೊಂಡ ಸಚಿವ ಸುರೇಶ್ ಕುಮಾರ್…

ತುಮಕೂರು,ಜನವರಿ,9,2021(www.justkannada.in): ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಅನ್ನ ಅಡ್ಡಗಟ್ಟಿದ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಲಕನನ್ನ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.jk-logo-justkannada-mysore

ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐ.ಕೆ.ಕಾಲೋನಿಯ ರಾಜ್ಯ ಹೆದ್ದಾರಿಯಲ್ಲಿಯೇ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಚಾಲಕ ಮತ್ತು ನಿರ್ವಾಹಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.minister-suresh-kumar-class-ksrtc-bus-driver-student-stop

ಶಾಲಾ ವಿದ್ಯಾರ್ಥಿಗಳು ಕೈ ನೀಡಿ ಸ್ಟಾಪ್ ಕೇಳಿದರೂ ಸಹ  ಕೆಎಸ್ಆರ್ಟಿಸಿ ಬಸ್ ಚಾಲಕ  ಬಸ್ ನಿಲ್ಲಿಸದೇ ಹಾಗೆಯೇ ತೆರಳುತ್ತಿದ್ದರು ಎನ್ನಲಾಗಿದೆ. ಈ  ವೇಳೆ   ಅದೇ ಮಾರ್ಗವಾಗಿ ಬೆಂಗಳೂರುನಿಂದ ಮಧುಗಿರಿ ಕಡೆ ಬರುತ್ತಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ಬಸ್ ನಿಲ್ಲಿಸಿದ್ದಾರೆ.  ನಂತರ ಕೆಎಸ್ ಆರ್ ಟಿಸಿ ಬಸ್  ಚಾಲಕನನ್ನು ತರಾಟೆ  ತೆಗೆದುಕೊಂಡು ಕಡ್ಡಾಯವಾಗಿ ವಿದ್ಯಾರ್ಥಿಗಳಿಗೆ ಬಸ್ ಸ್ಟಾಪ್ ನೀಡಲು ಸೂಚಿಸಿದರು.

Key words: minister-Suresh Kumar-class- KSRTC bus- driver –student-stop