ಅಪ್ರಾಪ್ತರಿಗೆ ಪಬ್, ಬಾರ್’ಗಳ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು, ಜುಲೈ 31, 2022 (www.justkannada.in): ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದು, ಅಪ್ರಾಪ್ತರಿಗೆ ಪಬ್, ಬಾರ್ ಗಳ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಬ್, ಬಾರ್ ಹಾಗೂ ಮದ್ಯದಂಗಡಿಗಳಿಗೂ ಖಡಕ್ ಸಂದೇಶ ರವಾನಿಸಿದ್ದು, ನಿಗದಿಪಡಿಸಿದ ಸಮಯದಲ್ಲಿ ಪಬ್ , ಬಾರ್ ಬಂದ್ ಮಾಡಬೇಕು ಎಂದು ಸೂಚನೆ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ಯುವಕ ಯುವತಿಯರು ಪಬ್, ಬಾರ್ ಗಳಲ್ಲಿ ಮೋಜು ಮಸ್ತಿಯಲ್ಲಿ ತೊಡಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಕ್ರಮ ವಹಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಬೆನ್ನಲ್ಲೇ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದು, ಅಪ್ರಾಪ್ತರಿಗೆ ಪಬ್, ಬಾರ್ ಗಳ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.