ಗ್ಯಾರಂಟಿ ಯೋಜನೆಗಳ ಜಾರಿಗೆ ಕಂಡೀಷನ್ ಹಾಕಿರುವ ಸರ್ಕಾರದ ವಿರುದ್ಧ ಶಾಸಕ ಅಶ್ವಥ್ ನಾರಾಯಣ್ ಟೀಕೆ.

ಬೆಂಗಳೂರು,ಜೂನ್,7,2023(www.justkannada.in): ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಐದು ಗ್ಯಾರಂಟಿ ಯೋಜನೆಳಿಗೆ ಕಂಡೀಷನ್ ಹಾಕಿರುವ ಬಗ್ಗೆ ಶಾಸಕ ಅಶ್ವಥ್ ನಾರಾಯಣ್  ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಅಶ್ವಥ್ ನಾರಾಯಣ್,  ಮೊದಲು ಎಲ್ಲಾ ಗೃಹಿಣಿಯರಿಗೆ ₹2 ಸಾವಿರ ಕೊಡ್ತೀವಿ ಎಂದಿದ್ದರು. ಆದರೆ ಈಗ ಗೃಹ ಲಕ್ಷ್ಮೀ ಯೋಜನೆಗೆ ಕಂಡಿಷನ್ ಹಾಕುತ್ತಿದ್ದಾರೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ನಿಮಗೂ ಫ್ರಿ, ನಮಗೂ ಫ್ರಿ ಎಂದಿದ್ದರು. ಇದೀಗ ಎಲ್ಲದಕ್ಕೂ ಷರತ್ತು ವಿಧಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಎಪಿಎಲ್, ಬಿಪಿಎಲ್ ಕಾರ್ಡ್ ಇರುವ ಮಹಿಳೆಯರಿಗೆ 2 ಸಾವಿರ ರೂ. ಕೊಡ್ತೀವಿ ಎಂದಿದ್ದರು. ಈಗ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಹಣ ಸಿಗುವುದಿಲ್ಲ ಎನ್ನುವ ಷರತ್ತು ವಿಧಿಸಿದ್ದಾರೆ. ಕಾಂಗ್ರೆಸ್​ನವರು ಮಾತಿಗೆ ತಪ್ಪುತ್ತಿರೋದು ಸರಿಯಲ್ಲ. ಮಹಿಳೆಯರು, ನಾಗರಿಕರ ಪರವಾಗಿ ನಾವು ಹೋರಾಟ ಮಾಡ್ತೇವೆ  ಎಂದು ಅಶ್ವಥ್ ನಾರಾಯಣ್ ಹೇಳಿದರು.

Key words: MLA -Aswath Narayan -criticizes – government –conditions-guarantee schemes.