ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಐ ಫೋನ್ ಮತ್ತು ಸ್ಮಾರ್ಟ್​ ವಾಚ್​ ಉಡುಗೊರೆ ನೀಡಿದ ಶಾಸಕ.

ಮಂಡ್ಯ,ಫೆಬ್ರವರಿ,11,2022(www.justkannada.in): ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ್ಧ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದ ವೇಳೆ  ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್​ ಗೆ ಶಾಸಕರೊಬ್ಬರು ಐಫೋನ್ ಮತ್ತು ಸ್ಮಾರ್ಟ್ ವಾಚ್ ಅನ್ನ ಗಿಫ್ಟ್ ನೀಡಿದ್ದಾರೆ.

ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಇಂದು ಮಂಡ್ಯದ ಪಿಇಎಸ್​ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮುಸ್ಕಾನ್ ನಿವಾಸಕ್ಕೆ ಭೇಟಿ ನೀಡಿದ್ದರು.  ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ವಿದ್ಯಾರ್ಥಿನಿ ನಿವಾಸಕ್ಕೆ ಭೇಟಿ ನೀಡಿದ ಶಾಸಕ ಜಿಶಾನ್ ಸಿದ್ದಿಕ್, ವಿದ್ಯಾರ್ಥಿನಿ ಮುಸ್ಕಾನ್ ​ಗೆ ಐ ಫೋನ್ ಮತ್ತು ಸ್ಮಾರ್ಟ್​ ವಾಚ್​ ಉಡುಗೊರೆ ನೀಡಿ, ಸನ್ಮಾನಿಸಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಜಿಶಾನ್ ಸಿದ್ದಿಕ್​ , ಮುಸ್ಕಾನ್​ ಘೋಷಣೆ ಕೂಗಿರುವುದು ನನಗೆ ಹೆಮ್ಮೆ ಅನಿಸಿದೆ. ಮಂಡ್ಯದಿಂದ ಇಂಡಿಯಾವರೆಗೂ ಆಕೆ ಬಗ್ಗೆ ಗರ್ವ ಪಡುತ್ತಿದೆ. ಹಿಜಾಬ್​ ಧರಿಸುವುದು ಮುಸ್ಲಿಂ ಹೆಣ್ಣುಮಕ್ಕಳ ಹಕ್ಕು. ಹೆಣ್ಣುಮಕ್ಕಳು ತಮ್ಮ ಹಕ್ಕಿನ ಬಗ್ಗೆ ಧೈರ್ಯದಿಂದ ಧ್ವನಿ ಎತ್ತಿದ್ದಾರೆ ಎಂದು ಹೇಳಿದ್ದಾರೆ.

Key words: MLA-gift-student-Mandya