“ಶಾಸಕ ಎಂ.ಸಿ.ಮನಗೂಳಿ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯರ ಸಂತಾಪ”

ಬೆಂಗಳೂರು,ಜನವರಿ,28,2021(www.justkannada.in) : ಮಾಜಿ ಸಚಿವ, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ವಿಧಿವಶರಾದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.jkಮೃತರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.MLA-M.C.Mangalore-death-CM.B.S.Yeddyurappa-Including-Gentlemen's-condolencesಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಜಾತ್ಯತೀತ ಜನತಾದಳದ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಸಿಂಧಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ಅತೀವ ದು:ಖವಾಗಿದೆ ಎಂದಿದ್ದಾರೆ.MLA-M.C.Mangalore-death-CM.B.S.Yeddyurappa-Including-Gentlemen's-condolencesದೀರ್ಘಕಾಲದಿಂದ ಸ್ನೇಹಿತರಾಗಿದ್ದ ಮನಗೂಳಿ ಜನಾನುರಾಗಿ ರಾಜಕಾರಣಿಯಾಗಿದ್ದರು. ಅವರ ಕುಟುಂಬವರ್ಗದ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

“ಅಧಿಕಾರ ಇರಲಿ, ಇರದೇ ಹೋಗಲಿ ಅವರು ಎಂದೂ ನಮ್ಮವರೇ ಆಗಿದ್ದರು”

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ನನ್ನ ಮಾರ್ಗದರ್ಶಕರಂತೆ ಇದ್ದ, ಜೆಡಿಎಸ್ ಪಕ್ಷದ ಪ್ರಬಲ ಪ್ರತಿಪಾದಕರಾಗಿದ್ದ, ದೇವೇಗೌಡರ ಪ್ರತಿಮೆ ಸ್ಥಾಪಿಸಿ ಅವರನ್ನು ದೇವರಂತೆ ಕಾಣುತ್ತಿದ್ದ ಎಂ.ಸಿ.ಮನಗೂಳಿ ಅವರು ನಿಧನರಾಗಿದ್ದಾರೆ.MLA-M.C.Mangalore-death-CM.B.S.Yeddyurappa-Including-Gentlemen's-condolencesಅಧಿಕಾರ ಇರಲಿ, ಇರದೇ ಹೋಗಲಿ ಅವರು ಎಂದೂ ನಮ್ಮವರೇ ಆಗಿದ್ದರು. ಮನಗೂಳಿ ಅವರ ಅಗಲಿಕೆ ಜೆಡಿಎಸ್ ಕುಟುಂಬಕ್ಕೆ ಆದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

key words : MLA-M.C.Mangalore-death-CM.B.S.Yeddyurappa-Including-Gentlemen’s-condolences