ಶಾಸಕ ತನ್ವೀರ್‌ ಸೇಠ್ ಕೊಲೆ ಯತ್ನ ಕೇಸ್: ಪ್ರಕರಣದ ತನಿಖೆ ಬಗ್ಗೆ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದು ಹೀಗೆ…

kannada t-shirts

ಮೈಸೂರು,ಡಿ,17,2019(www.justkannada.in): ಶಾಸಕ ತನ್ವೀರ್‌ ಸೇಠ್ ಕೊಲೆಯತ್ನ ಪ್ರಕರಣ ಸಂಬಂಧ ,  ಪ್ರಕರಣ ನಡೆದು ಒಂದು ತಿಂಗಳಾದರೂ ಆರೋಪಿ ಸ್ಥಳದಲ್ಲೇ ಸಿಕ್ಕರೂ ಅಂತ್ಯ ಕಂಡಿಲ್ಲ. ಈ ನಡುವೆ ಪ್ರಕರಣ ಮುಗಿಸಲು ಇನ್ನೂ ಒಂದು ತಿಂಗಳು ಬೇಕಾಗುತ್ತೆ ಎಂದು ಮೈಸೂರು ನಗರ ಪೊಲೀಸ್ ಕಮಿಷನರ ಕೆ.ಟಿ ಬಾಲಕೃಷ್ಣ ಹೇಳಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಕಮಿಷನರ ಕೆ.ಟಿ ಬಾಲಕೃಷ್ಣ, ನಾವು ಯಾವುದೇ ಅಥವಾ ಯಾರದ್ದೇ ಒತ್ತಡಕ್ಕೂ ಮಣಿದಿಲ್ಲ. ಇಲ್ಲಿವರೆಗೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಕರಣದ ಹಿಂದೆ ಸಂಘಟನೆಯೊಂದರ ಕೈವಾಡ ಇದೆ ಎನ್ನುವ ಬಗ್ಗೆಯೂ ಈಗಲೇ ಹೇಳಲಾಗುವುದಿಲ್ಲ. ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಈ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು  ತಿಳಿಸಿದ್ದಾರೆ.

ಹಾಗೆಯೇ ನಾವು ಕಾಲ ಕಾಲಕ್ಕೆ ಕೋರ್ಟ್‌ಗೆ ವರದಿ ಸಲ್ಲಿಸುತ್ತಿದ್ದೇವೆ. ಚಾರ್ಜ್‌ಶೀಟ್ ಸಲ್ಲಿಸಲು 90 ದಿನಗಳ ಅವಕಾಶ ಇದೆ. ಅಷ್ಟರಲ್ಲಿ ಸಮಗ್ರ ತನಿಖೆ ಮಾಡಿ ವರದಿ ಸಲ್ಲಿಸುತ್ತೇವೆ ಎಂದು ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹೇಳಿದರು.

Key words: MLA Tanveer Seth-assult case- mysore-police  Commissioner – KT Balakrishna.

website developers in mysore