ಸ್ಪೀಕರ್ ಹುದ್ದೆಗೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ.

kannada t-shirts

ಬೆಂಗಳೂರು,ಮೇ,23,2023(www.justkannada.in):  ರಾಜ್ಯ ವಿಧಾನಸಭೆಯ ಸ್ಪೀಕರ್  ಸ್ಥಾನಕ್ಕೆ ಶಾಸಕ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸಿಎಂ ಸಿದ್ಧರಾಮಯ್ಯ,  ಡಿಸಿಎಂ ಡಿಕೆ ಶಿವಕುಮಾರ್,   ಸಚಿವ ಜಮೀರ್  ಅಹ್ಮದ್ ಖಾನ್ ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.

ಸ್ಪೀಕರ್ ಸ್ಥಾನಕ್ಕೆ ಹಿರಿಯ ಶಾಸಕಾರದ ಆರ್.ವಿ.ದೇಶಪಾಂಡೆ, ಟಿಬಿ ಜಯಚಂದ್ರ ಹಾಗೂ ಹೆಚ್. ​ಕೆ ಪಾಟೀಲ್ ಇವರಲ್ಲಿ ಒಬ್ಬರನ್ನು ಸ್ಪೀಕರ್ ಮಾಡಲು ಕಾಂಗ್ರೆಸ್​ ಹೈಕಮಾಂಡ್ ಚರ್ಚೆ ನಡೆಸಿತ್ತು. ಆದರೆ ಇವರ ಪೈಕಿ ಯಾರೂ ಸ್ಫೀಕರ್ ಆಗಲು ಒಪ್ಪದ ಹಿನ್ನೆಲೆ ಅಂತಿಮವಾಗಿ ಯುಟಿ ಖಾದರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

Key words: MLA -UT Khader -submits -nomination – Speaker post.

website developers in mysore