ಉಪಚುನಾವಣೆಯಲ್ಲಿ ಗೆದ್ಧ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ- ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ….

ಬೆಂಗಳೂರು,ಅಕ್ಟೋಬರ್,31,2020(www.justkannada.in):  ಆರ್.ಆರ್ ನಗರ ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಅವರಿಗೆ ಸಚಿವ ಸ್ಥಾನ  ನೀಡುತ್ತೇವೆ  ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದರು.jk-logo-justkannada-logo

ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ  ಮಾಧ್ಯಮಗಳ ಜತೆ ಮಾತನಾಡಿದ ಸಿಎಂ  ಬಿ. ಎಸ್ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಸಚಿವ ಸ್ಥಾನ ನೀಡುತ್ತೇನೆ. ಚುನಾವಣೆ ಮುಗಿದ ಕೂಡಲೇ ನೂರಕ್ಕೆ ನೂರರಷ್ಟು ಮುನಿರತ್ನರನ್ನು ಮಂತ್ರಿಯನ್ನಾಗಿ ಮಾಡುತ್ತೇನೆ ಎಂದರು.

ಈಗಾಗಲೇ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ  ಬೇರೆ ಬೇರೆ ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಉಪ ಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ. ಉಪಚುನಾವಣೆ ಬಳಿಕ ದೆಹಲಿಗೆ ಹೋಗುತ್ತೇನೆ. ಬಳಿಕ ಸಂಪುಟ ವಿಸ್ತರಣಯೋ ಅಥವಾ ಪುನರಚನೆಯೋ ಎಂದು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು. muniratna-soon-become-minister-by-election-cm-bs-yeddyurappa
ಆರ್.ಆರ್ ನಗರದಲ್ಲಿ ಮುನಿರತ್ನ ಈಗಾಗಲೇ ಗೆದ್ದಾಗಿದೆ. ಆದರೇ ಎಷ್ಟು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ನೋಡಬೇಕು. 40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Key words: Muniratna- soon – become -minister – by-election-CM BS Yeddyurappa