ಮುನಿರತ್ನ ಮತ್ತೆ ಕಾಂಗ್ರೆಸ್ ಸೇರುವ ವಿಚಾರ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಅಕ್ಟೊಂಬರ್,03,2020(www.justkannada.in) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಮುನಿರತ್ನ ಅವರು,  ಆರ್ ಆರ್ ನಗರ ಬಿಜೆಪಿ ಟಿಕೆಟ್ ಕೈತಪ್ಪಿದರೇ ಮತ್ತೆ ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ವಿಚಾರ ಚರ್ಚೆಯಾಗುತ್ತಿದೆ. ಹೀಗಾಗಿ ಈ ಕುರಿತು ಪ್ರತಿಕ್ರಿಯಿಸಿರುವಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್   ಪಕ್ಷಕ್ಕೆ ಬರಲು ಯಾರು ಬೇಕಾದರು ಅರ್ಜಿ ಹಾಕಬಹುದು. ಅರ್ಜಿ ಬಂದ ಬಳಿಕ ಕುಳಿತುಕೊಂಡು ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.jk-logo-justkannada-logoಮಾಜಿ ಶಾಸಕ ಮುನಿರತ್ನ ಮತ್ತೆ ಕಾಂಗ್ರೆಸ್ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದ  ಡಿಕೆಶಿ, ಪಕ್ಷಕ್ಕೆ ಬರಲು ಯಾರು ಬೇಕಾದರೂ ಅರ್ಜಿ ಹಾಕಬಹುದು. ಆದರೆ, ಅರ್ಜಿ ಬಂದ ಬಳಿಕ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಟಾಂಗ್ ನೀಡಿದ್ದಾರೆ.ಈಗಾಗಲೇ, ಶಿರಾ ಕ್ಷೇತ್ರ ಉಪಚುನಾವಣೆ ಸಂಬಂಧಿಸಿದಂತೆ ಎಲ್ಲರೂ ಸೇರಿ ಒಂದು ಅಭಿಪ್ರಾಯಕ್ಕೆ ಬಂದಿದ್ದು, ಅಭ್ಯರ್ಥಿಯ ಹೆಸರನ್ನು ದೆಹಲಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

key words : Munirat’s-re-joining-Congress-d.k.shivakumar-says