ದಿಲ್ಲಿಯಲ್ಲಿ ಕೇಂದ್ರದ ಮಾಜಿ ಸಚಿವರ ಪತ್ನಿಯ ಬರ್ಬರ ಹತ್ಯೆ

ಬೆಂಗಳೂರು, ಜುಲೈ 07, 2021 (www.justkannada.in): ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿವಂಗತ ಪಿ.ರಂಗರಾಜನ್ ಕುಮಾರಮಂಗಲಂ ಪತ್ನಿಯನ್ನು ಮಂಗಳವಾರ ರಾತ್ರಿ ಹತ್ಯೆ ಮಾಡಲಾಗಿದೆ.

ಕಿಟ್ಟಿ ಕುಮಾರಮಂಗಲಂ ಮೃತರು. 2000ರ ಆಗಸ್ಟ್​ 23ರಂದು ಪಿ.ರಂಗರಾಜನ್ ಮೃತಪಟ್ಟಿದ್ದರು. ಇವರ ಪತ್ನಿ ಕಿಟ್ಟಿ ಅವರು ವಸಂತ್ ವಿಹಾರ್​ನ ನಿವಾಸದಲ್ಲಿ ವಾಸವಿದ್ದರು.

ಮಂಗಳವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಿಟ್ಟಿ ಅವರನ್ನು ಬರ್ಬರವಾಗಿ ಕೊಂದಿದ್ದಾರೆ. ಈ ಸಂಬಂಧ ಓರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ.

ಚಿನ್ನಾಭರಣ ಮತ್ತು ಹಣ ಲೂಟಿ ಮಾಡಿದ್ದಾರೆ, ಸದ್ಯ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.