ದೇವಾಲಯದಲ್ಲಿ ಮೂವರ ಹತ್ಯೆ ಪ್ರಕರಣ: ತಕ್ಷಣ ಆರೋಪಿಗಳ ಬಂಧನಕ್ಕೆ ಸಚಿವ ಡಾ.ನಾರಾಯಣಗೌಡ ಸೂಚನೆ…

kannada t-shirts

ಮಂಡ್ಯ,ಸೆಪ್ಟಂಬರ್, 11,2020(www.justkannada.in):  ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ದರೋಡೆಕೋರು ದೇವಸ್ಥಾನದ ಹುಂಡಿ ದೋಚಿ ನಂತರ ಅಲ್ಲಿ ಮಲಗಿದ್ದ ಮೂವರ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಬಂಧಿಸುವಂತೆ ಪೊಲೀಸರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಸೂಚನೆ ನೀಡಿದರು.murder-three-temple-minister-dr-narayana-gowda-visit-place

ಘಟನೆ ನಡೆದ ಅರ್ಕೇಶ್ವರ ದೇವಾಲಯದ ಸ್ಥಳಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ  ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಜೊತೆ ಮಾತನಾಡಿದ ಸಚಿವ ನಾರಾಯಣಗೌಡ, ಘಟನೆಗೆ ಕಾರಣರಾದವರನ್ನ ತಕ್ಷಣ ಬಂಧಿಸುವಂತೆ ಸೂಚಿಸಿದ್ದಾರೆ.murder-three-temple-minister-dr-narayana-gowda-visit-place

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಘಟನೆ ಬಗ್ಗೆ ಸಚಿವ ನಾರಾಯಣಗೌಡ ಮಾಹಿತಿ ನೀಡಿದ್ದಾರೆ. ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರ್ ಅವರ ಬಳಿಯೂ ಚರ್ಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿಯೂ ಸರ್ಕಾರ ಘೋಷಿಸಿದೆ.

Key words: Murder – three – temple-Minister -Dr. Narayana Gowda –visit-place

website developers in mysore