ಅರಕೇಶ್ವರ ದೇಗುಲದಲ್ಲಿ ಮೂವರ ಹತ್ಯೆ ಪ್ರಕರಣ: ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

ಮಂಡ್ಯ,ಸೆಪ್ಟಂಬರ್,14,2020(www.justkannada.in):  ಮಂಡ್ಯದಲ್ಲಿ ಅರಕೇಶ್ವರ ದೇಗುಲದ ಅರ್ಚಕರು ಸೇರಿ ಮೂವರ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.jk-logo-justkannada-logo

ಮದ್ದೂರು ತಾಲೂಕು ಸಾದೊಳಲು ಗೇಟ್  ಬಳಿ ಆರೋಪಿಗಳಿಗೆ ಪೊಲೀಸರು ಗುಂಡು ಹಾರಿಸಿ ಆರೋಪಿಗಳನ್ನ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸಾದೊಳಲು ಗೇಟ್  ಬಳಿ ಇದ್ದ ಮೂವರು ಆರೋಪಿಗಳನ್ನ ಪೊಲೀಸರು ಶರಣಾಗಲು ಸೂಚನೆ ನೀಡಿದರು. ಈ ವೇಳೆ ಪೊಲೀಸರ ಮೇಲೆ  ಚಾಕು ಮತ್ತು ಕಲ್ಲಿನಿಂದ ಹಲ್ಲೆ ಮಾಡಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದರು ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.murdered-case-arakeshwara-temple-mandya-police-accused-arrest

ಘಟನೆ ವೇಳೆ ಎಸ್ ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳಿಗೆ ಗಾಯಗಳಾಗಿದ್ದು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Key words: murdered –case- Arakeshwara temple-mandya-police – accused -arrest