ಆಸ್ಪತ್ರೆಯಿಂದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡಿಸ್ಚಾರ್ಜ್…

ಮೈಸೂರು,ಫೆ,28,2020(www.justkannada.in): ಲಘು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೈಸೂರಿನಲ್ಲಿದ್ದ ಅರ್ಜುನ್ ಜನ್ಯ ಅವರಿಗೆ ಬುಧವಾರ ರಾತ್ರಿ ಲಘು ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಅರ್ಜುನ್ ಜನ್ಯ ಅವರಿಗೆ ಆಂಜಿಯೋಪ್ಲ್ಯಾಸ್ಟಿ  ಮಾಡಲಾಗಿತ್ತು. ಇದೀಗ ಅರ್ಜುನ್ ಜನ್ಯ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಡಿಸ್ಚಾರ್ಜ್ ಮಾಡಲಾಗಿದೆ.

ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅರ್ಜುನ್ ಜನ್ಯ ಅವರು ವಿಶ್ರಾಂತಿಗೆ ತೆರಳಿದ್ದಾರೆ.  ಕನಿಷ್ಟ 4 ವಾರ ವಿಶ್ರಾಂತಿ ಪಡೆಯುವಂತೆ ಅರ್ಜುನ್ ಜನ್ಯಗೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಅರ್ಜುನ್ ಜನ್ಯ  ಆರೋಗ್ಯ ದೃಷ್ಠಿಯಿಂದ ಸಿನಿಮಾ, ರಿಯಾಲಿಟಿ ಶೋಗಳಿಂದ ದೂರ ಉಳಿಯಲಿದ್ದಾರೆ .

Key words: Music director -Arjun Janya- discharged – hospital-mysore