ಬೈಕ್ ನಲ್ಲಿ ಬರುತ್ತಿದ್ದ ಯುವಕನನ್ನ ಅಡ್ಡ ಹಾಕಿದ ದುಷ್ಕರ್ಮಿಗಳು: ನಂತರ ನಡೆದಿದ್ದು ಘೋರ ಕೃತ್ಯ….

ಮೈಸೂರು,ಆಗಸ್ಟ್,31,2020(www.justkannada.in):  ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನ ಅಡ್ಡಹಾಕಿದ ದುಷ್ಕರ್ಮಿಗಳ ಗುಂಪು ಹಣಕ್ಕೆ ಬೇಡಿಕೆ ಇಟ್ಟು ನಂತರ ಚಾಕುವಿನಿಂದ ಹಲ್ಲೆ ಮಾಡುರುವ  ಘಟನೆ ಮೈಸೂರಿನಲ್ಲಿ ನಡೆದಿದೆ.jk-logo-justkannada-logo

ಮೈಸೂರು ತಾಲೂಕಿನ ಮಾರಗೌಡನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಮಾರಗೌಡನಹಳ್ಳಿ ಪ್ರಸನ್ನ ( 30 ) ಮೇಲೆ ಈ ಹಲ್ಲೆ ನಡೆದಿದೆ. ಗಾಂಜಾ ಮತ್ತಿನಲ್ಲಿ ಯುವಕನ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಸನ್ನ ಎಂಬುವವರು ಬೈಕ್ ನಲ್ಲಿ ಬರುವಾಗ ಅವರನ್ನ ಅಡ್ಡ ಹಾಕಿದ ಮೂರು ಜನರ ಗುಂಪು ಹಣ ಕೊಡುವಂತೆ ಪೀಡಿಸಿದ್ದಾರೆ.mysore-assult-boy-knife-attack-money

ಈ ವೇಳೆ ನನ್ನ ಬಳಿ ಹಣ ಇಲ್ಲ ಎಂದಿದ್ದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳ ಗುಂಪು ಪ್ರಸನ್ನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ಚಾಕು ಇರಿತದಿಂದ ಗಾಯಗೊಂಡ ಪ್ರಸನ್ನ ಅವರನ್ನ  ಕೆ. ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Key words: mysore- assult-boy-knife-attack- money