ಆ.21ಕ್ಕೆ ಕೆ.ಆರ್ ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಸಿಎಂ ಬಿಎಸ್ ವೈ ಬಾಗಿನ ಅರ್ಪಣೆ…

ಮೈಸೂರು,ಆ,15,2020(www.justkannada.in): ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಭರ್ತಿಯಾಗಿರುವ ಕೆ‌.ಆರ್‌.ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಆಗಸ್ಟ್ 21 ರಂದು ಸಿಎಂ ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.mysore-cm-bs-yeddyurappa-bagina-krs-kabini-dam

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,  ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಚರಣೆ, ತಲಕಾಡು ಪಂಚಲಿಂಗ ದರ್ಶನದ ಬಗ್ಗೆ ಇದುವರೆಗೂ ಚರ್ಚೆಯಾಗಿಲ್ಲ. ಕೊರೋನಾ ಹಾಗೂ ಪ್ರವಾಹ ಹೆಚ್ಚಾಗಿರುವ ಹಿನ್ನೆಲೆ ಆ ವಿಚಾರ ಪ್ರಸ್ತಾಪವಾಗಿಲ್ಲ. ಆಗಸ್ಟ್ 20 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದರು.mysore-cm-bs-yeddyurappa-bagina-krs-kabini-dam

ಹಾಗೆಯೇ ಮುಖ್ಯಮಂತ್ರಿ ಅವರೇ ಮೈಸೂರಿಗೆ ಬಂದಾಗ ಈ ಬಗ್ಗೆ ತಿಳಿಸಲಿದ್ದಾರೆ. ಅಗಸ್ಟ್ 21 ರಂದು ಬಂದು ಕೆ.ಆರ್ ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.

Key words: mysore- CM BS Yeddyurappa- Bagina-KRS – Kabini dam